(ನ್ಯೂಸ್ ಕಡಬ) newskadaba.com, ಜು.15. ಬೆಳಗಾವಿ: ಶಾಲಾ ಆವರಣದಲ್ಲಿದ್ದ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶಾಲೆಯಲ್ಲಿ 41 ಮಕ್ಕಳಿದ್ದು ಅಲ್ಲದೆ ಈ ಶಾಲೆಯ ಪಕ್ಕದಲ್ಲೇ 20 ಅಧಿಕ ಮನೆಗಳಿದ್ದು, ಎಲ್ಲರೂ ಈ ಟ್ಯಾಂಕಿನ ನೀರನ್ನೇ ಅವಲಂಭಿಸಿದ್ದರು ಎನ್ನಲಾಗಿದೆ.
ಸೋಮವಾರ ಮುಂಜಾನೆ 6 ಗಂಟೆಯ ಸುಮಾರಿಗೆ ಇದೇ ಟ್ಯಾಂಕಿನ ಮೂಲಕ ನೀರು ಸಂಗ್ರಹ ಮಾಡಲಾಗಿದೆ. ಇದಾದ ಬಳಿಕವಷ್ಟೇ ಇದಕ್ಕೆ ಕೀಟನಾಶಕ ಬೆರಸಿರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.













