(ನ್ಯೂಸ್ ಕಡಬ) newskadaba.com, ಜು. 21. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಕೀರಪ್ಪ ಗಟಕಂಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಂಟ್ವಾಳ ಪೇಟೆಯಲ್ಲಿದ್ದ ತಮ್ಮ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಬೆಳಗ್ಗೆ ಡ್ಯೂಟಿಗೆ ಗೈರಾಗಿದ್ದ ಪಿಎಸ್ಐ ಮನೆಯಲ್ಲೇ ಇದ್ದರು. ಪೊಲೀಸ್ ಠಾಣೆ ಸಿಬ್ಬಂದಿ ಕಾಲ್ ಮಾಡಿದ್ರೂ ರಿಸೀವ್ ಮಾಡಿರಲಿಲ್ಲ. ಸಂಜೆ ಅವರ ಬಾಡಿಗೆ ಮನೆಗೆ ಹೋಗಿದ್ದಾಗ, ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








