ಹಿಮಾಚಲದಲ್ಲಿ ಭೂಕುಸಿತ- ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿದ ಬಂಟ್ವಾಳದ 47 ಮಂದಿ

(ನ್ಯೂಸ್ ಕಡಬ) newskadaba.com ಜು. 21. ಗುಡ್ಡ ಕುಸಿತ ಸಂಭವಿಸಿದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆಂದು ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್ ನಲ್ಲಿ ಸಿಲುಕಿ ಹಾಕಿಕೊಂಡಿರುವ ಕುರಿತು ಹಿಮಾಚಲ ಪ್ರದೇಶದಿಂದ ವರದಿಯಾಗಿದೆ.

 

ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದ್ದು, ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಹಿನ್ನೆಲೆ ಯಾವುದೇ ಅಪಾಯ ಸಂಭಿಸಿವಿಲ್ಲ ಎಂದೆನ್ನಲಾಗಿದೆ.

ಭೂಕುಸಿತದಿಂದಾಗಿ ಸುಮಾರು 3 ಕಿಲೋ ಮೀಟರ್ ವರೆಗೆ ವಾಹನಗಳ ಸಾಲು ನಿಂತಿದ್ದು, ಮಣ್ಣು ತೆರವು ಕಾರ್ಯ ಭರದಿಂದ ಸಾಗುತ್ತಿದೆ ಎಂದು ಪ್ರವಾಸಿಗರು ತಿಳಿಸಿರುವುದಾಗಿ ವರದಿಯಾಗಿದೆ.

Scroll to Top