ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ



(ನ್ಯೂಸ್ ಕಡಬ) newskadaba.com ಜು. 26. ಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್‌ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಎಸ್‌ಡಿಆರ್‌ಎಫ್ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ







ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ, ಸಬ್-ಇನ್ಸ್‌ಪೆಕ್ಟರ್ ಆಶಿಶ್ ದಿಮ್ರಿ ನೇತೃತ್ವದ ಎಸ್‌ಡಿಆರ್‌ಎಫ್ ಸೋನ್‌ಪ್ರಯಾಗ್‌ನ ತಂಡವನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಿದರು. ಬಳಿಕ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆಯ ಸಮಯದಲ್ಲಿ, ಎಸ್‌ಡಿಆರ್‌ಎಫ್ ತಂಡ ನಿರ್ಬಂಧಿತ ಮಾರ್ಗದ ಹೊರಗೆ ಸಿಲುಕಿಕೊಂಡಿದ್ದ ಸುಮಾರು 100 ಯಾತ್ರಿಕರನ್ನು ರಕ್ಷಣೆ ಮಾಡಿದೆ ಎಂದು ತಿಳಿದುಬಂದಿದೆ.






ಈ ಮಧ್ಯೆ ಲೋಕೋಪಯೋಗಿ ಇಲಾಖೆಯ ಕಾರ್ಮಿಕರು ತೊಂದರೆಗೊಳಗಾದ ಯಾತ್ರಾರ್ಥಿಗಳ ಸಂಚಾರವನ್ನು ಪುನಃಸ್ಥಾಪಿಸಲು ಪರ್ಯಾಯ ಮಾರ್ಗವನ್ನು ರಚಿಸುತ್ತಿದ್ದಾರೆ. ಎಸ್‌ಡಿಆರ್‌ಎಫ್ ಕಟ್ಟೆಚ್ಚರ ವಹಿಸಿದ್ದು, ಈ ಪ್ರದೇಶದಲ್ಲಿ ಮೇಲ್ವಿಚಾರಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ವರದಿಯಾಗಿದೆ.

error: Content is protected !!
Scroll to Top