ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆಜೆ ಜಾರ್ಜ್‌ಗೆ ಬಿಗ್‌ ರಿಲೀಫ್..!‌



(ನ್ಯೂಸ್‌ ಕಡಬ) newskadaba.com, ಆ.06:‌ ಸ್ಮಾರ್ಟ್ಮೀಟರ್ಟೆಂಡರ್ನಲ್ಲಿ 16 ಸಾವಿರ ಕೋಟಿ ರೂ. ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ಅವರಿಗೆ ಬಿಗ್ರಿಲೀಫ್ಸಿಕ್ಕಿದೆ.







ಪ್ರಕರಣದಲ್ಲಿ ಕೆಜೆ ಜಾರ್ಜ್ವಿರುದ್ದ ನಡೆಸಿದ ತನಿಖಾ ವರದಿಯನ್ನು ಕೋರ್ಟ್ಗೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಆದೇಶವನ್ನು ಪ್ರಶ್ನಿಸಿ ಕೆಜೆ ಜಾರ್ಜ್ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.






ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಲೋಕಾಯುಕ್ತ ಎಸ್ಪಿ ಮತ್ತು ದೂರುದಾರರಾದ ಬಿಜೆಪಿ ನಾಯಕರಾದ ಸಿಎನ್ಅಶ್ವತ್ಥ್ನಾರಾಯಣ್‌, ಎಸ್‌. ಆರ್ವಿಶ್ವನಾಥ್‌, ಧೀರಜ್ಮುನಿರಾಜು ಅವರಿಗೆ ನೋಟಿಸ್ಜಾರಿ ಮಾಡಿದೆ.

ಲೋಕಾಯುಕ್ತ ಪೊಲೀಸರಿಂದ ವರದಿ ನೀಡುವಂತೆ ವಿಚಾರಣಾಧೀನ ನ್ಯಾಯಾಲಯ ಮಾಡಿರುವ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್ಎರಡು ವಾರ ವಿಚಾರಣೆಯನ್ನು ಮುಂದೂಡಿದೆ.

error: Content is protected !!
Scroll to Top