(ನ್ಯೂಸ್ ಕಡಬ) newskadaba.com, ಆ.06: ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ 16 ಸಾವಿರ ಕೋಟಿ ರೂ. ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ಕೆಜೆ ಜಾರ್ಜ್ ವಿರುದ್ದ ನಡೆಸಿದ ತನಿಖಾ ವರದಿಯನ್ನು ಕೋರ್ಟ್ಗೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೆಜೆ ಜಾರ್ಜ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಲೋಕಾಯುಕ್ತ ಎಸ್ಪಿ ಮತ್ತು ದೂರುದಾರರಾದ ಬಿಜೆಪಿ ನಾಯಕರಾದ ಸಿಎನ್ ಅಶ್ವತ್ಥ್ ನಾರಾಯಣ್, ಎಸ್. ಆರ್ ವಿಶ್ವನಾಥ್, ಧೀರಜ್ ಮುನಿರಾಜು ಅವರಿಗೆ ನೋಟಿಸ್ ಜಾರಿ ಮಾಡಿದೆ.
ಲೋಕಾಯುಕ್ತ ಪೊಲೀಸರಿಂದ ವರದಿ ನೀಡುವಂತೆ ವಿಚಾರಣಾಧೀನ ನ್ಯಾಯಾಲಯ ಮಾಡಿರುವ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್ ಎರಡು ವಾರ ವಿಚಾರಣೆಯನ್ನು ಮುಂದೂಡಿದೆ.













