ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ: ರಾಹುಲ್‌ಗೆ ಜಾಮೀನು



(ನ್ಯೂಸ್‌ ಕಡಬ) newskadaba.com, ಆ.06:‌ ಜಾರ್ಖಂಡ್ನಲ್ಲಿ ನಡೆಸಿದ್ದ ಚುನಾವಣೆ ರ್ಯಾಲಿಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ಶಾ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನಾಯಕ ರಾಹುಲ್ಗಾಂಧಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.







ಹೈಕೋರ್ಟ್ನಿರ್ದೇಶನದಂತೆ ರಾಹುಲ್ಗಾಂಧಿ ಇಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರಾದರು. ರಾಹುಲ್ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮುಂದಿನ ಹಂತದ ಪ್ರಕ್ರಿಯೆಗಳು ನಡೆಯಲಿವೆ ಎಂದು ರಾಹುಲ್ಗಾಂಧಿ ಪರ ವಕೀಲರು ತಿಳಿಸಿದ್ದಾರೆ.






2018 ಸಾರ್ವಜನಿಕ ಸಭೆಯೊಂದರಲ್ಲಿ ಅಮಿತ್ಶಾ ವಿರುದ್ದ ರಾಹುಲ್ಗಾಂಧಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಪ್ರತಾಪ್ಕುಮಾರ್ಎಂಬುವವರು ಪ್ರಕರಣ ದಾಖಲಿಸಿದ್ದರು.

error: Content is protected !!
Scroll to Top