(ನ್ಯೂಸ್ ಕಡಬ) newskadaba.com, ಆ.07: ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣನವರ್ ಹಾಗೂ ಯೂಟ್ಯೂಬರ್ ಸಮೀರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವರದಿಗಾರ ಹರೀಶ್ ಅವರ ದೂರಿನಂತೆ ಎಫ್ಐಆರ್ ದಾಖಲಾಗಿದೆ.
ಎಫ್ಐಆರ್ನಲ್ಲಿ ಗಿರೀಶ್ ಮಟ್ಟಣನವರ್(ಎ1), ಮಹೇಶ್ ಶೆಟ್ಟಿ ತಿಮರೋಡಿ(ಎ2), ಯೂಟ್ಯೂಬರ್ ಸಮೀರ್(ಎ3) ಹಾಗೂ ಜಯಂತ್(ಎ4) ಎಂದು ಇತರರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.









