ಸಿಆರ್‌ಪಿಎಫ್‌ ವಾಹನ ಅಪಘಾತ: 3 ಸೈನಿಕರು ಸಾವು

(ನ್ಯೂಸ್‌ ಕಡಬ) newskadaba.com, ಆ.07: ಕೇಂದ್ರ ಮೀಸಲು ಪಡೆ ಸಿಬ್ಬಂದಿಗಳಿದ್ದ ವಾಹನ ಕಂದಕಕ್ಕೆ ಉರುಳಿ ಬಿದ್ದು, ಮೂವರು ಸೈನಿಕರು ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಜಮ್ಮುಕಾಶ್ಮೀರದ ಉಧಂಪುರ್ ಜಿಲ್ಲೆಯನಲ್ಹಾದಲ್ಲಿ ನಡೆದಿದೆ.

23 ಮಂದಿ ಸಿಆರ್ಪಿಎಫ್ಯೋಧರು ಬಸಂತ್ಘರ್ನಿಂದ ಮರಳುತ್ತಿದ್ದರು. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪಿದರೆ, ಗಂಭೀರ ಗಾಯಗೊಂಡ ಮತ್ತೋರ್ವ ಯೋಧ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ಅವರು ಉಧಂಪುರ್ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದು, ಗಾಯಗೊಂಡ ಯೋಧರಿಗೆ ಎಲ್ಲಾ ರೀತಿಯ ಸಹಾಯ ಒದಗಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ಮಾಡಿದ್ದಾರೆ.

Scroll to Top