(ನ್ಯೂಸ್ ಕಡಬ) newskadaba.com, ಆ.07: ಕೇಂದ್ರ ಮೀಸಲು ಪಡೆ ಸಿಬ್ಬಂದಿಗಳಿದ್ದ ವಾಹನ ಕಂದಕಕ್ಕೆ ಉರುಳಿ ಬಿದ್ದು, ಮೂವರು ಸೈನಿಕರು ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಜಮ್ಮು–ಕಾಶ್ಮೀರದ ಉಧಂಪುರ್ ಜಿಲ್ಲೆಯ ನಲ್ಹಾದಲ್ಲಿ ನಡೆದಿದೆ.
23 ಮಂದಿ ಸಿಆರ್ಪಿಎಫ್ ಯೋಧರು ಬಸಂತ್ಘರ್ನಿಂದ ಮರಳುತ್ತಿದ್ದರು. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪಿದರೆ, ಗಂಭೀರ ಗಾಯಗೊಂಡ ಮತ್ತೋರ್ವ ಯೋಧ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ಉಧಂಪುರ್ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದು, ಗಾಯಗೊಂಡ ಯೋಧರಿಗೆ ಎಲ್ಲಾ ರೀತಿಯ ಸಹಾಯ ಒದಗಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.










