ಕಂದಕಕ್ಕೆ ಉರುಳಿದ ಸಿಆರ್‌ಪಿಎಫ್ ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿದ್ದ ವಾಹನ; ಮೂವರು ಸಾವು

(ನ್ಯೂಸ್‌ ಕಡಬ) newskadaba.com, ಆ.08: ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಕಂದಕಕ್ಕೆ ಉರುಳಿದ್ದು, ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದ ಕಾಂಡ್ವಾ ಬಳಿ ಗುರುವಾರ ಸಂಭವಿಸಿದೆ.

ಬಸಂತ್ ಘರ್‌ನಲ್ಲಿ ನಡೆದ ಕಾರ್ಯಾಚರಣೆಯಿಂದ ಭದ್ರತಾ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೀಡಾದ ವಾಹನವು ಸೇನಾ ಪಡೆಯ 187 ನೇ ಬೆಟಾಲಿಯನ್‌ಗೆ ಸೇರಿತ್ತು. ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದರು, ಇತರ 16 ಮಂದಿ ಗಾಯಗೊಂಡರು. ಎಲ್ಲಾ ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಈ ವೇಳೆ ಮತ್ತೊಬ್ಬ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಯಿತು.

 

Scroll to Top