ಧರ್ಮಸ್ಥಳ ಕೇಸ್‌: ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ – ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ



(ನ್ಯೂಸ್‌ ಕಡಬ) newskadaba.com, ಆ.08: ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.







ಮಾನಹಾನಿಕರ ವರದಿ ಪ್ರಸಾರಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರಿದ್ದ ದ್ವಿ ಪೀಠವು ವಿಚಾರಣೆ ನಡೆಸಿತು. ಆದಾಗ್ಯೂ ಈ ವಿಷಯದಲ್ಲಿ ಮಾಧ್ಯಮಗಳ ನಿರ್ಬಂಧದ ಅಗತ್ಯವಿದೆಯೇ ಎಂಬುದಕ್ಕೆ ಆಕ್ಷೇಪ ವ್ಯಕ್ತಪಡಿಸಿತು.






error: Content is protected !!
Scroll to Top