ಸ್ವಾತಂತ್ರ್ಯ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

(ನ್ಯೂಸ್‌ ಕಡಬ) newskadaba.com, ಆ.15:‌ ಇಂದು ಎಲ್ಲೆಡೆ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದೆ. 79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್ಷಾ ಪರೇಡ್ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ತೆರೆದ ಜೀಪ್ನಲ್ಲಿ ಪರೇಡ್ವೀಕ್ಷಣೆ ಮಾಡಿದರು. ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲರನ್ನೂ ಸ್ಮರಿಸೋಣ ಎಂದು ಹೇಳಿದರು. ಪಹಲ್ಗಾಮ್ದಾಳಿಯಲ್ಲಿ ಮಡಿದವರು ಹಾಗೂ ಪಾಕಿಸ್ತಾನದ ವಿರುದ್ದ ಹೋರಾಡಿ ಮಡಿದವರಿಗೂ ಸಿಎಂ ಸಿದ್ದರಾಮಯ್ಯ ಗೌರವ ಸಲ್ಲಿಸಿದರು.

Scroll to Top