ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ: ಇಬ್ಬರು ಸಾವು



(ನ್ಯೂಸ್‌ ಕಡಬ) newskadaba.com, ಆ.17:‌ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಬೈರಾಪುರ ಕ್ರಾಸ್ಬಳಿ ನಡೆದಿದೆ.







ಮಂಡ್ಯ ಮೂಲದ ಶ್ವೇತಾ(38), ಕನಕಪುರ ಮೂಲದ ಬಾಲನಾಯಕ(42) ಮೃತರು. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.






ಮೃತರಿಬ್ಬರು ಮಂತ್ರಾಲಯ ರಾಯರ ದರ್ಶನಕ್ಕೆ ಬಂದಿದ್ದರು. ರಾಯರ ದರ್ಶನ ಮುಗಿಸಿ ಮಸ್ಕಿಯಿಂದ ಬೆಂಗಳೂರಿಗೆ ಸರ್ಕಾರಿ ಬಸ್ನಲ್ಲಿ ತೆರಳುತ್ತಿದ್ದರು. ವೇಳೆ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ಡಿಕ್ಕಿಯಾಗಿದ್ದು, ಪರಿಣಾಮ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬಳ್ಳಾರಿ ಎಸ್ಪಿ ಡಾ.ಶೋಭಾರಾಣಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಗ್ಗೆ ಸಿರಿಗೇರಿ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top