ಸಿಎಂ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ



(ನ್ಯೂಸ್‌ ಕಡಬ) newskadaba.com, ಆ.18: ಸಿಎಂ ಸಿದ್ದರಾಮಯ್ಯ ಅವರು ಕೊಲೆಗಳನ್ನು ಮಾಡಿಸಿದ್ದಾರೆ ಎಂದು ಮಹೇಶ್ತಿಮರೋಡಿ ಆರೋಪ ಮಾಡಿದ್ದಾರೆ. ಅವರು ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಎಂದರೆ ನಾನು ನಂಬುವುದಿಲ್ಲ. ಬಗ್ಗೆಯೂ ತನಿಖೆ ನಡೆಯಲಿ ಎಂದು ವಿಧಾನ ಪರಿಷತ್ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ.







ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಆರೋಪ ಮಾಡಿದವರ ವಿರುದ್ದ ತನಿಖೆ ನಡೆಸದಿದ್ದಲ್ಲಿ ಸರ್ಕಾರವೂ ಪ್ರಕರಣದಲ್ಲಿ ಶಾಮೀಲಾಗಿದೆ ಎಂದು ನಾವು ಅನುಮಾನ ಪಡಬೇಕಾಗುತ್ತದೆ ಎಂದಿದ್ದಾರೆ.






ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಅಲ್ಲಿಗೆ ನಾವು ಹೋಗಿ ಹೋರಾಟ ಮಾಡದೇ ಕನ್ವರ್ಟ್ಆದವರು, ಮತಾಂತರಕ್ಕೆ ಬೆಂಬಲ ನೀಡುವವರು ಹೋಗಿ ಹೋರಾಟ ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

error: Content is protected !!
Scroll to Top