(ನ್ಯೂಸ್ ಕಡಬ) newskadaba.com, ಆ.20 ಬೆಂಗಳೂರು: ರಾಜ್ಯ ಸರ್ಕಾರದ 2025-26ನೇ ಸಾಲಿನ ₹3,352.57 ಕೋಟಿ ಮೊತ್ತದ ಪೂರಕ ಅಂದಾಜು (ಮೊದಲನೇ ಕಂತು) ಅನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರು ಪೂರಕ ಅಂದಾಜು ಮಂಡಿಸಿದರು. ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶಕ್ಕೆ 10 ಕೋಟಿ ರು. ವೆಚ್ಚ ಮಾಡಿರುವ ಬಗ್ಗೆ ಪೂರಕ ಅಂದಾಜಿನಲ್ಲಿ ಉಲ್ಲೇಖಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಜರುಗಿದ ಸಚಿವ ಸಂಪುಟ ಕಾರ್ಯಕ್ರಮದ ವೆಚ್ಚಕ್ಕಾಗಿ 3.69 ಕೋಟಿ ರು. ಹೆಚ್ಚುವರಿಯಾಗಿ ಒದಗಿಸಲಾಗಿದೆ. ರಾಜ್ಯದ ಎಲ್ಲಾ ನೋಂದಣಿ ಮತ್ತು ಮುದ್ರಾಂಕ ಕಚೇರಿಗಳಿಗೆ ಐಟಿ ಉಪಕರಣಗಳ ಪೂರೈಕೆ, ಅಳವಡಿಕೆ ಕಾರ್ಯಾಚರಣೆ ಮತ್ತು ನಿರ್ವಹಣೆ ಹಾಗೂ ಅಗತ್ಯ ಇರುವ ಮಾನವ ಸಂಪನ್ಮೂಲ ವೆಚ್ಚಗಳನ್ನು ಪಾವತಿಸಲು 50 ಕೋಟಿ ರು. ಒದಗಿಸಲಾಗಿದೆ.









