(ನ್ಯೂಸ್ ಕಡಬ) newskadaba.com, ಆ.23: ಧರ್ಮಸ್ಥಳದಲ್ಲಿ ಶವ ಹೂತಿದ್ದೆ ಎಂಬ ಮಾಸ್ಕ್ಮ್ಯಾನ್ ಸಿಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಸುಳ್ಳು ದೂರಿನ ಹಿನ್ನೆಲೆ ಎಸ್ಐಟಿ ಅಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಮಾಸ್ಕ್ಮ್ಯಾನ್ನ್ನು ಬಂಧಿಸಲಾಗಿದ್ದು, ಇಂದು ಬೆಳ್ತಂಗಡಿ ಕೋರ್ಟ್ಗೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.
ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್ಮ್ಯಾನ್ಗೆ ಎಸ್ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯಲಿದೆ. ನಂತರ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಎಸ್ಐಟಿ ಮನವಿ ಮಾಡಲಿದ್ದು, ಈ ಮೂಲಕ ಎಸ್ಐಟಿ ಹೆಚ್ಚಿನ ವಿಚಾರಣೆ ನಡೆಸಲಿದೆ.








