(ನ್ಯೂಸ್ ಕಡಬ) newskadaba.com, ಆ.23: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಬಗ್ಗೆ ದೂತ ಯೂಟ್ಯೂಬ್ ಚಾನಲ್ನಲ್ಲಿ ವಿಡಿಯೋ ಪ್ರಸಾರ ಮಾಡಿದ್ದ ಆರೋಪದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿ. ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಕೋರ್ಟ್ ಆದೇಶ ಉಲ್ಲಂಘನೆಯಾಗಿ ನ್ಯಾಯಾಂಗ ನಿಂದನೆಯಾಗಲಿದೆ.
ವಿಡಿಯೋ ಪ್ರಸಾರದ ಬಗ್ಗೆ ಜು.12ರಂದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್ಗೆ 3 ಬಾರಿ ನೋಟಿಸ್ ಜಾರಿ ಮಾಡಲಾಗಿತ್ತು. ಸಮೀರ್ನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ತೆರಳಿದ್ದರು. ಆದರೆ, ಸಮೀರ್ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು.








