KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ

ಬೆಂಗಳೂರು: ಆಗಸ್ಟ್ 26 ಮತ್ತು 27 ರಂದು ಗೌರಿ – ಗಣೇಶ ಹಬ್ಬ ಆಚರಿಸಲು ಜನ ಭಾರಿ ಸಂಖ್ಯೆಯಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹೋಗಲು ಸಜ್ಜಾಗಿದ್ದು, ಜನದಟ್ಟಣೆ ತಪ್ಪಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ರಾಜ್ಯದಾದ್ಯಂತ ವಿವಿಧ ಸ್ಥಳಗಳಿಗೆ 1,500 ವಿಶೇಷ ಬಸ್‌ಗಳನ್ನು ಓಡಿಸುವುದಾಗಿ ಶುಕ್ರವಾರ ಪ್ರಕಟಿಸಿದೆ.

ನಿಯಮಿತ ವೇಳಾಪಟ್ಟಿಗಳ ಜೊತೆಗೆ, ಆಗಸ್ಟ್ 31 ರಂದು ಭಾನುವಾರ ವಿಶೇಷ ಬಸ್ ಗಳನ್ನು ಸಹ ಒದಗಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್​ಗಳು ತೆರಳುತ್ತವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳು ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿ ಕಡೆಗೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿವೆ.

Scroll to Top