(ನ್ಯೂಸ್ ಕಡಬ) newskadaba.com, ಆ.26: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ.
ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಹಾಗೂ ಮಾಂಸದ ಅಂಗಡಿಗಳು ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಗೌರಿ–ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಕೆಆರ್ ಮಾರುಕಟ್ಟೆಯಲ್ಲಿ ಹೂವು–ಹಣ್ಣು ಖರೀದಿ ಭರಾಟೆ ಜೋರಾಗಿದೆ. ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಈಗಾಗಲೇ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಪ್ಲಾಸ್ಟರ್ ಆಫ್ ಪ್ಯಾರೀಸ್ ಮೂರ್ತಿ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಬಿಬಿಎಂಪಿ ಕೂಡ ಪರಿಸರಸ್ನೇಹಿ ಗಣಪತಿಯ ಪೂರ್ತಿಯನ್ನು ಖರೀದಿಸಿ ಹಬ್ಬ ಆಚರಿಸುವಂತೆ ಕರೆ ನೀಡಲಾಗಿದೆ.












