(ನ್ಯೂಸ್ ಕಡಬ) newskadaba.com, ಆ.26: ಧರ್ಮಸ್ಥಳ ಬುರುಡೆ ಪ್ರಕರಣದ ಕೇಂದ್ರ ಸ್ಥಳವಾದ ಮಹೇಶ್ ತಿಮರೋಡಿ ಮನೆ ಮೇಲೆ ವಿಶೇಷ ತನಿಖಾ ತಂಡ(ಎಸ್ಐಟಿ) ಇಂದು ದಾಳಿ ನಡೆಸಿದೆ.
ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನ ಹೇಳಿಕೆಯಂತೆ ಇಂದು ಪೊಲೀಸರು ಕೋರ್ಟ್ ಸರ್ಚ್ ವಾರೆಂಟ್ ಪಡೆದು ತಿಮರೋಡಿಗೆ ಆಗಮಿಸಿದ್ದಾರೆ.
ಎಸ್ಐಟಿ ಉತ್ಖನನ ನಡೆಸಿದ ನಂತರ ತಾನು ತಿಮರೋಡಿ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ. ನಾನು ಮೊಬೈಲ್ ಬಳಕೆ ಮಾಡುತ್ತಿರಲಿಲ್ಲ. ನನ್ನ ಮೊಬೈಲ್ ತಿಮರೋಡಿ ಕಡೆಯವರ ಬಳಿ ಇತ್ತು ಎಂದು ಚಿನ್ನಯ್ಯ ಹೇಳಿದ್ದ. ಈ ಕಾರಣಕ್ಕೆ ಚಿನ್ನಯ್ಯ ತಂಗಿದ್ದ ಕೊಠಡಿಯ ಮಹಜರು ಹಾಗೂ ಮೊಬೈಲ್ ಸಂಗ್ರಹಿಸಲು ಪೊಲೀಸರು ತಿಮರೋಡಿ ನಿವಾಸಕ್ಕೆ ಆಗಮಿಸಿದ್ದಾರೆ.












