ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ವರ್ಗಾವಣೆ ► ನೂತನ ಕಮಿಷನರ್ ಆಗಿ ವಿಪುಲ್ ಕುಮಾರ್ ನೇಮಕ



(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ದೃಷ್ಟಿಯಿಂದ ರಾಜ್ಯದಲ್ಲಿನ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.








ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ರವರನ್ನು ವರ್ಗಾವಣೆ ಮಾಡಿರುವ ಸರಕಾರ ನೂತನ ಪೊಲೀಸ್ ಕಮಿಷನರ್ ಆಗಿ 1999 ನೇ ಬ್ಯಾಚಿನ ಐಪಿಎಸ್ ಅಧಿಕಾರಿ ವಿಫುಲ್ ಕುಮಾರ್ ರವರನ್ನು ನೇಮಿಸಿದೆ. ವಿಪುಲ್‌ ಕುಮಾರ್ ರವರು ಪ್ರಸ್ತುತ ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರಿನಲ್ಲಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.






error: Content is protected !!
Scroll to Top