ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಹೇಳಿಕೆ: ಡಿಕೆಶಿ ಕ್ಷಮೆಯಾಚಿಸುವಂತೆ BJP ಆಗ್ರಹ



(ನ್ಯೂಸ್ಕಡಬ) newskadaba.com ಆ. 29. ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ.







ಗುರುವಾರದಂದು ಸುದ್ದಿಗಾರರೊಂದಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಅದು ಧರ್ಮಸ್ಥಳ ವಿಷಯವಾಗಿರಬಹುದು ಅಥವಾ ಚಾಮುಂಡಿ ದೇವಾಲಯವಾಗಿರಬಹುದು. ರಾಜ್ಯ ಸರ್ಕಾರ ಹಿಂದೂಗಳನ್ನು ಮತ್ತು ಹಿಂದೂ ಧರ್ಮವನ್ನು ಅವಮಾನಿಸಿದೆ. ಮೈಸೂರು ಒಡೆಯರು ಚಾಮುಂಡೇಶ್ವರಿ ದೇವಿಯನ್ನು ತಮ್ಮ ಕುಟುಂಬ ದೇವತೆಯಾಗಿ ಪೂಜಿಸುತ್ತಾರೆ. ಇದು ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಹೇಳುವ ಮೂಲಕ ಸರ್ಕಾರ ಏನನ್ನು ತೋರಿಸಲು ಪ್ರಯತ್ನಿಸುತ್ತಿದೆ.






ಮಸೀದಿ ಅಥವಾ ಚರ್ಚ್‌ ಗಳು ಎಲ್ಲರಿಗೂ ಸೇರಿವೆ ಎಂದು ಸರ್ಕಾರ ಹೇಳುವುದಿಲ್ಲ, ಆದರೆ, ಹಿಂದೂ ದೇವಾಲಯಗಳು ಮಾತ್ರ ಎಲ್ಲರಿಗೂ ಸೇರಿವೆ ಎಂದು ಹೇಳುತ್ತದೆ. ತಮ್ಮ ಹೇಳಿಕೆ ಕುರಿತು ಡಿಕೆಶಿ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

error: Content is protected !!
Scroll to Top