ಉಡುಪಿ: ತೊಟ್ಟಂ ಬೀಚ್ ಹತ್ತಿರ ಮಗುಚಿದ ದೋಣಿ; ನಾಲ್ವರು ಮೀನುಗಾರರ ರಕ್ಷಣೆ



(ನ್ಯೂಸ್ಕಡಬ) newskadaba.com, ಆಗಸ್ಟ್ 29 ಉಡುಪಿ : ಸಮುದ್ರದ ಪ್ರಕ್ಷುಬ್ಧತೆಯಿಂದಾಗಿ ಮೀನುಗಾರಿಕಾ ದೋಣಿ ಮಗುಚಿ ಬಿದ್ದ ಘಟನೆ ಮಲ್ಪೆಯ ತೊಟ್ಟಂ ಬೀಚ್ ಬಳಿ ಆಗಸ್ಟ್ 29 ರಂದು ನಡೆದಿದೆ. ಸಮುದ್ರಕ್ಕೆ ಇಳಿದಿದ್ದ ನಾಲ್ವರು ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.







ತೊಟ್ಟಂ ವಾರ್ಡ್ ಪುರಸಭೆ ಸದಸ್ಯ ಯೋಗೇಶ್ ಅವರು ತಕ್ಷಣ ವೃತ್ತಿಪರ ಸಮಾಜ ಸೇವಕ ಈಶ್ವರ್ ಮಲ್ಪೆ ಮತ್ತು ಅವರ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಈಶ್ವರ್ ಅವರು, ಸ್ಥಳೀಯರಾದ ಪ್ರವೀಣ್ ಮತ್ತು ಉದಯ್ ಅವರೊಂದಿಗೆ ಲೈಫ್ ಜಾಕೆಟ್‌ಗಳನ್ನು ತೆಗೆದುಕೊಂಡು ಸ್ಥಳಕ್ಕೆ ಧಾವಿಸಿ, ನಾಲ್ವರು ಮೀನುಗಾರರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.






“ಮಲ್ಪೆಯಲ್ಲಿ ಸಮುದ್ರವು ಅತ್ಯಂತ ಅನಿರೀಕ್ಷಿತ ಮತ್ತು ಪ್ರಕ್ಷುಬ್ಧವಾಗಿದೆ. ಈಜಲು ತಿಳಿದಿದ್ದರೂ ಯಾರೂ ಕೂಡ ನೀರಿಗೆ ಇಳಿಯಬಾರದು. ಸಮುದ್ರದ ಅಲೆಗಳು ಯಾವುದೇ ಮುನ್ಸೂಚನೆಯಿಲ್ಲದೆ ಇದ್ದಕ್ಕಿದ್ದಂತೆ ಏರಬಹುದು. ಮೀನುಗಾರರು ಸಮುದ್ರಕ್ಕೆ ಹೋಗುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್‌ಗಳನ್ನು ಧರಿಸಬೇಕು” ಎಂದು ಈಶ್ವರ್ ಮಲ್ಪೆ ತಿಳಿಸಿದರು.

error: Content is protected !!
Scroll to Top