ಅರಿಯಡ್ಕ: ಕಾರು – ಲಾರಿ ಮುಖಾಮುಖಿ ►ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.5. ಲಾರಿ ಮತ್ತು ಕಾರು ಮಧ್ಯೆ ಢಿಕ್ಕಿ ಸಂಭವಿಸಿ, ವಿದೇಶ ಪ್ರಯಾಣಕ್ಕಾಗಿ ಬಜ್ಪೆ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಇಬ್ಬರ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಗಂಭೀರ ಗಾಯಗೊಂಡಿರುವ ಗಾಯಾಳುಗಳನ್ನು ಕೊಡಗು ಜಿಲ್ಲೆಯ ನಾಪೊಕ್ಲು ನಿವಾಸಿಗಳಾದ ಖಾಸಿಂ (40), ಹಾರೀಸ್ (28) ಮತ್ತು ಅಶ್ಫಾಕ್ (40) ಮತ್ತು ಕಾರು ಚಾಲಕ ಅರ್ಷದ್ (27) ಎಂದು ಗುರುತಿಸಲಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group