(ನ್ಯೂಸ್ ಕಡಬ) newskadaba.com, ಸೆ.06 ಉಡುಪಿ, ಸೆ.5: ಬುಡೋಕಾನ್ ಕರಾಟೆ ಇಂಟರ್ನೇಷನಲ್ನ ಅಧ್ಯಕ್ಷ ಹಾಗೂ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಅಲೈಡ್ ಆರ್ಟ್ಸ್ನ ಸಂಸ್ಥಾಪಕ ಹನ್ಸಿ ಪ್ರವೀಣ್ ಕುಮಾರ್ ಅವರ ಸ್ಮರಣಾರ್ಥ ಎರಡು ದಿನಗಳ ಆಹ್ವಾನಿತ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಷಿಪ್ ನಾಳೆ ಅಂಬಾಗಿಲಿನ ಅಮೃತ ಗಾರ್ಡನ್ಸ್ನಲ್ಲಿ ಪ್ರಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಸಹಾಯಕ
ಮುಖ್ಯ ಶಿಕ್ಷಕ ಎಂ.ಸುರೇಶ್ ತಿಳಿಸಿದ್ದಾರೆ. ಉಡುಪಿ ಪ್ರೆಸ್ಕ್ಲಬ್ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರ, ತಮಿಳುನಾಡು ಸೇರಿ ದಂತೆ ವಿವಿಧ ರಾಜ್ಯಗಳೂ ಸೇರಿದಂತೆ ನಾಡಿನ ಎಲ್ಲಡೆಯಿಂದ 2000ಕ್ಕೂ ಅಧಿಕ ಮಂದಿ ಕರಾಟೆಪಟುಗಳು ಎರಡು ದಿನಗಳ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.








