‘ನನಗೆ ವಿಷ ನೀಡಿ’ – ನ್ಯಾಯಾಧೀಶರ ಮುಂದೆ ದರ್ಶನ್‌ ಹೈಡ್ರಾಮಾ



(ನ್ಯೂಸ್‌ ಕಡಬ) newskadaba.com ಸೆ. 09. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಠಿಣ ಪರಿಸ್ಥಿತಿಯಲ್ಲಿ ದಿನದೂಡುತ್ತಿದ್ದು ಅವರು ನ್ಯಾಯಾಧೀಶರ ಎದುರು ಮನವಿಯೊಂದನ್ನು ಸಲ್ಲಿಸಿದ್ದು, ಮನವಿ ಆಲಿಸಿದ ನ್ಯಾಯಾಧೀಶರು ಒಂದು ಕ್ಷಣ ನಿಶ್ಶಬ್ದರಾಗಿದ್ದಾರೆ.







ಮತ್ತೊಮ್ಮೆ ಜೈಲಿಗೆ ಮರಳಿದ ದರ್ಶನ್ ಗೆ ಈ ಬಾರಿ ಯಾವುದೇ ವಿಶೇಷ ಸೌಲಭ್ಯ ಪಡೆಯದಂತೆ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರಿಂದ, ಅವರು ಸಾಮಾನ್ಯ ಕೈದಿಗಳಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಠಿಣ ನಿಯಮಗಳ ನಡುವೆ ಬದುಕುತ್ತಿದ್ದಾರೆ. ಈ ಸ್ಥಿತಿಯಿಂದಾಗಿ ಅವರು ದೈಹಿಕವಾಗಿ ಮತ್ತು ಮಾನಸಿಕವಾಗಿ ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ ನ್ಯಾಯಾಲಯದ ವಿಚಾರಣೆಯಲ್ಲಿ ಬಹಿರಂಗಪಡಿಸಿದರು.






ಬೆಂಗಳೂರು 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಗೆ ದರ್ಶನ್ ವಿಡಿಯೋ ಕಾಲ್ ಮುಖಾಂತರ ಹಾಜರಾಗಿ, ಒಂದು ಮನವಿ ಇದೆ ಎಂದು ಹೇಳಿ ನ್ಯಾಯಾಧೀಶರ ಗಮನ ಸೆಳೆದರು. “ನಾನು ಬಿಸಿಲು ನೋಡಿ ಈಗಾಗಲೇ 30 ದಿನಗಳಾಗಿವೆ. ಕೈಯಲ್ಲಿ ಫಂಗಸ್ ಬಂದಿದೆ. ನನಗೆ ಬೇರೆ ಯಾವ ಸವಲತ್ತೂ ಬೇಡ, ಕೋರ್ಟ್ ವಿಷ ನೀಡಲಿ” ಎಂದು ಕೇಳಿಕೊಂಡಿದ್ಧಾರೆ. ಈ ಮಾತು ಕೇಳಿದ ನ್ಯಾಯಾಧೀಶರು, “ಹಾಗೆಲ್ಲ ಕೇಳಬಾರದು” ಎಂದು ತಕ್ಷಣ ತಿರಸ್ಕಾರ ವ್ಯಕ್ತಪಡಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

 

error: Content is protected !!
Scroll to Top