ಐಪಿಎಲ್ ಹುಚ್ಚಿಗೆ ರಾಜ್ಯದಲ್ಲಿ ಮೊದಲ ಬಲಿ ► ಕಾರಣ ತಿಳಿದರೆ ಬೆಚ್ಚಿ ಬೀಳುತ್ತೀರ…!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.20. ಐಪಿಎಲ್ ನಿಂದಾಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ಸಮೀಪದ ಹೊಟೇಲ್ ಪ್ರಶಾಂತ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಆಗ್ರಹಾರದ ನಿವಾಸಿ ಯೋಗೀಶ್ (30) ಎಂದು ಗುರುತಿಸಲಾಗಿದೆ.

ಐಪಿಎಲ್ ಬೆಟ್ಟಿಂಗ್ ಕಟ್ಟಿ ಲಕ್ಷಾಂತರ ರುಪಾಯಿ ಕಳೆದುಕೊಂಡಿರುವುದರಿಂದ ಈತ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಇಂದು ಮಧ್ಯಾಹ್ನದ ವೇಳೆಯಲ್ಲಿ ಹೆಚ್.ಎಸ್.ಆರ್ ಲೇಔಟ್ ಸಮೀಪದ ಹೊಟೇಲ್ ಪ್ರಶಾಂತ್ ಗೆ ತೆರಲಿ ಅಲ್ಲಿ ಒಂದು ರೂಮು ಬಾಡಿಗೆಗೆ ಪಡೆದುಕೊಂಡಿರುತ್ತಾನೆ. ನಂತರ 12.30ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಾನಸಿಕ ಒತ್ತಡವೇ ಆತ್ಮಹತ್ಯೆಗೆ ಮೂಲ ಕಾರಣ ಎಂದು ಶಂಕಿಸಲಾಗಿದೆ. ಘಟನೆಯ ಕುರಿತು ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ

 

error: Content is protected !!
Scroll to Top