ಪುತ್ತೂರು: ಲಾರಿ – ಕಾರು ಢಿಕ್ಕಿ ► ಐವರು ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಎ.21. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ವಿಟ್ಲ – ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಕುಂಬಳೆಯ ಕೆದೂರು ಸಮೀಪದ ಪಾದೆಕಲ್ಲು ನಿವಾಸಿ ಸದಾಶಿವ ಶೆಟ್ಟಿ ಎಂಬವರು ತನ್ನ ಕುಟುಂಬ ಸಮೇತ ಪುತ್ತೂರಿಗೆ ಆಗಮಿಸುತ್ತಿದ್ದ ವೇಳೆ ವಿಟ್ಲ ಸಮೀಪದ ಚಂದಳಿಕೆ ತಿರುವಿನಲ್ಲಿ ಪುತ್ತೂರು ಕಡೆಯಿಂದ ಬರುತ್ತಿದ್ದ ಕಲ್ಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಇವರಿದ್ದ ಕಾರಿಗೆ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಘಟನೆಯಲ್ಲಿ ಸದಾಶಿವ ಶೆಟ್ಟಿ (60), ಅವರ ಪತ್ನಿ ಸುಮಿತ್ರಾ (56), ಪುತ್ರ ಜಯಕುಮಾರ್ (32), ಪುತ್ತಿಗೆ ಬಾಣಬೈಲು ನಿವಾಸಿ ದಾಮೋದರ ಶೆಟ್ಟಿ (33), ಪತ್ನಿ ಜಯಲಕ್ಷ್ಮಿ (30), ಪುತ್ರ ಮೋಕ್ಷಿತ್ (5) ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ‌. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಬೆಳೆ ಸಮೀಕ್ಷೆ ರೈತರ ಆಕ್ಷೇಪಣೆಗೆ ಅವಕಾಶ

 

error: Content is protected !!
Scroll to Top