ಪುತ್ತೂರಿನ ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ; 16 ಮಂದಿಗೆ ಗಾಯ



(ನ್ಯೂಸ್‌ ಕಡಬ) newskadaba.com,  ಸೆ.29 ಪುತ್ತೂರು: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಶಿರಾಡಿ ಸಮೀಪ ರವಿವಾರ ಸಂಜೆ ನಡೆದಿದೆ.





ಶಿರಾಡಿ ಗ್ರಾಮದ ಗುಂಡ್ಯದ ಹತ್ತಿರ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ  ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾಜಹಂಸ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸುಮಾರು 3 ಗಂಟೆಗಳ ಕಾಲ ವಾಹನ ಸಂಚಾರವು ಅಸ್ತವ್ಯಸ್ತಗೊಂಡಿತ್ತು.






ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬಸ್‌ನಲ್ಲಿದ್ದ ಒಂಬತ್ತು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಹಂಸ ಬಸ್‌ನಲ್ಲಿದ್ದ ಏಳು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನೆಲ್ಯಾಡಿ ಹೊರಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ, ವಾಹನ ಸಂಚಾರವನ್ನು ಸುಗಮಗೊಳಿಸಿದರು

error: Content is protected !!
Scroll to Top