ಬೆಂಗಳೂರು : ಮಡದಿ ಗೆ 15 ಬಾರಿ ಇರಿದು ಕೊಂದು ಗಂಡ ಆತ್ಮಹತ್ಯೆ



(ನ್ಯೂಸ್ಕಡಬ) newskadaba.com,  ಅ.01 ಬೆಂಗಳೂರು :  ಪತ್ನಿಗೆ 15ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ನಗರದ ಜ್ಞಾನಭಾರತಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಲ್ಲಾಳ ಮುಖ್ಯರಸ್ತೆಯ ಪ್ರೆಸ್‌‍ಲೇಔಟ್‌ನಲ್ಲಿ ವಾಸವಾಗಿದ್ದ ಮಂಜು(27) ಕೊಲೆಯಾದ ಮಹಿಳೆ. ಧರ್ಮಶೀಲನ್‌ (29) ಎಂಬಾತನೇ ಪತ್ನಿ ಕೊಲೆ ಮಾಡಿ ಫ್ಯಾನಿಗೆ ನೇಣು ಹಾಕಿಕೊಂಡು ಆತಹತ್ಯೆಗೆ ಶರಣಾದ ಪತಿ.





ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ದಂಪತಿ ಮಧ್ಯೆ ಕಳೆದ ರಾತ್ರಿ ಜಗಳವಾಗಿ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಧರ್ಮಶೀಲನ್‌ ದುಬೈನಲ್ಲಿ ಪೆಂಟರ್‌ರಾಗಿ ಕೆಲಸಮಾಡುತ್ತಿದ್ದು, ಮಂಜು ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್‌ ಆಗಿ ಸೇವೆ ಸಲ್ಲಿಸುತ್ತಿದ್ದರು.ಕಳೆದ ಒಂದು ತಿಂಗಳ ಹಿಂದೆಯಷ್ಟೆ ಬೆಂಗಳೂರಿಗೆ ಬಂದು ಪ್ರೆಸ್‌‍ಲೇಔಟ್‌ನಲ್ಲಿ ದಂಪತಿ ವಾಸವಾಗಿದ್ದರು. ತಮಿಳುನಾಡು ಮೂಲದ ಧರ್ಮಶೀಲನ್‌ ವೃತ್ತಿಯಲ್ಲಿ ಪೆಂಟರ್‌ ಕೆಲಸ ಮಾಡುತ್ತಿದ್ದು, ಮದ್ಯವೆಸನಿಯಾಗಿದ್ದ. ಪದೆಪದೇ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.






ಕಳೆದ ರಾತ್ರಿ ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಪತ್ನಿಗೆ ಮನಬಂದಂತೆ ಅನೇಕ ಬಾರಿ ಇರಿದು, ಕೊಲೆ ಮಾಡಿದ್ದಾನೆ. ನಂತರ ಆತನೂ ಸಹ ಅದೇ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತಹತ್ಯೆಗೆ ಶರಣಾಗಿದ್ದಾನೆ.ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ಜ್ಞಾನಭಾರತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

error: Content is protected !!
Scroll to Top