(ನ್ಯೂಸ್ ಕಡಬ) newskadaba.com, ಅ.02 ಹನೂರು : ತಾಲೂಕಿನ ಕೆ.ಗುಂಡಾಪುರ ಗ್ರಾಮದ ಪುಟ್ಟೇಗೌಡ ಎಂಬುವರಿಗೆ ಸೇರಿದ ಕಬ್ಬಿನ ತೋಟದಲ್ಲಿ ಸಾಯಂಕಾಲದ ವೇಳೆಯಲ್ಲಿ ಎರಡು ಚಿರತೆ ಮರಿಗಳು ಸಿಕ್ಕಿದೆ. ಕಬ್ಬಿನ ತೋಟದಲ್ಲಿ ಚಿರತೆ ಮರಿಗಳು ಇರುವುದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಬಳಿಕ ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಒಂದು ಹೆಣ್ಣು ಮತ್ತು ಒಂದು ಗಂಡು ಚಿರತೆ ಮರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಸಮಯದಲ್ಲಿ ಹನೂರು ಮಲೆ ಮಹದೇಶ್ವರ ಬಫರ್ ವಲಯದ ಆರ್.ಎಫ್.ಓ ನಾಗರಾಜು, ರಾಮಾಪುರ ವಲದಯದ ಆರ್.ಎಫ್.ಓ ಉಮಾಪತಿ, ಉಪವಲಯ ಅರಣ್ಯ ಅಧಿಕಾರಿಗಳಾದ ಗಿರೀಶ್, ನಂದೀಶ್, ಗಸ್ತು ಅರಣ್ಯ ಪಾಲಕರಾದ ಚಿನ್ನಸ್ವಾಮಿ, ಲಿಂಗರಾಜು, ಸುರೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.








