ಕೊನೆಯ ಕ್ಷಣದಲ್ಲಿ ಸುಳ್ಯ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ಎಸ್ಡಿಪಿಐ ► ಕಾರಣವೇನು ಗೊತ್ತೇ…?

(ನ್ಯೂಸ್ ಕಡಬ) newskadaba.com ಸುಳ್ಯ, ಎ.24. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಎಸ್ಡಿಪಿಐ ಪಕ್ಷವು ಕೊನೆಯ ಹಂತದಲ್ಲಿ ಸ್ಪರ್ಧೆಯಿಂದ ಹಿಂಜರಿದಿದ್ದು, ಖಾತೆ ತೆರೆಯಲು ಪರದಾಡುತ್ತಿರುವ ಕಾಂಗ್ರೆಸ್ ಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಡಿಪಿಐ ಅಭ್ಯರ್ಥಿಯಾಗಿ ಘೋಷಿಸಲಾಗಿದ್ದ ಆನಂದ ಮಿತ್ತಬೈಲ್, 2103 ರ ಚುನಾವಣೆಯಲ್ಲಿ ಎಸ್ಡಿಪಿಐ ಪಕ್ಷದ ಸ್ಪರ್ಧೆಯಿಂದ ಬಿಜೆಪಿಗೆ ಅನುಕೂಲಕರವಾಗಿತ್ತು. ಈ ಚುನಾವಣೆಯಲ್ಲೂ ಜಾತ್ಯಾತೀತ ಮತಗಳು ವಿಭಜನೆಯಾಗಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸುವ ಉದ್ದೇಶದಿಂದ ಕೊನೆಯ ಕ್ಷಣದಲ್ಲಿ ಸುಳ್ಯ ಕ್ಷೇತ್ರದಲ್ಲಿ ಎಸ್ಡಿಪಿಐ ಸ್ಪರ್ಧೆಯಿಂದ ಹಿಂದೆ ಸರಿಯಲಾಗಿದೆ ಎಂದಿದ್ದಾರೆ.

Also Read  ದ.ಕ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಐಎಂಡಿ ರೆಡ್ ಅಲರ್ಟ್ ಘೋಷಣೆ      

error: Content is protected !!
Scroll to Top