ಶೂನ್ಯ ನೆರಳಿನ ದಿನದ ಪ್ರಾತ್ಯಕ್ಷಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.25. ಪಿಲಿಕುಳ  ವಿಜ್ಞಾನ ಕೇಂದ್ರದಲ್ಲಿ ಏಪ್ರಿಲ್ 24 ರಂದು ಶೂನ್ಯ ನೆರಳಿನ ದಿನದ ವಿದ್ಯಮಾನದ ಬಗ್ಗೆ ವಿವರಣೆಯನ್ನು ಮತ್ತು ಅದಕ್ಕೆ ಸಂಬಂಧ ಪಟ್ಟ ಪ್ರಾತ್ಯಕ್ಷಿಕೆಗಳನ್ನು ಆಸಕ್ತ ಸಂದರ್ಶಕರಿಗೆ ಏರ್ಪಡಿಸಲಾಗಿತ್ತು. ಸಂದರ್ಶಕರು ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿ ಸಂದೇಹಗಳಿಗೆ ವಿವರಣೆಯನ್ನು ಪಡೆದುಕೊಂಡರು. ಶೈಕ್ಷಣಿಕ ಸಹಾಯಕ ಶರಣಯ್ಯ  ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ ಕೆ.ವಿ ರಾವ್ ಉಪಸ್ಥಿತರಿದ್ದರು.

Scroll to Top