ದೀಪಾವಳಿ ಪ್ರಯುಕ್ತ 2,500 ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ

(ನ್ಯೂಸ್ಕಡಬ) newskadaba.com . 14. ಮುಂಬರುವ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 17ರಿಂದ 20ರ ವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅ.22 ಹಾಗೂ 26ರಂದು ವಿವಿಧೆಡೆಗಳಿಂದ ಬೆಂಗಳೂರಿಗೆ 2,500 ವಿಶೇಷ ಬಸ್‌ ಗಳನ್ನು ರಸ್ತೆಗಿಳಿಸಲು ಸರಕಾರ ನಿರ್ಧರಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್‌ಗಳು ಸಂಚರಿಸಲಿವೆ.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳಾದ ಮದುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶ್ಶೂರ್, ಎರ್ನಾಕುಲಂ, ಕೋಯಿಕ್ಕೋಡ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ ಎಂದು ಪ್ರಕಟಣೆ ತಿಳಿಸಿವೆ.

Scroll to Top