ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಾಯವಾಣಿ ಆರಂಭ



(ನ್ಯೂಸ್‌ ಕಡಬ) newskadaba.com  ಅ. 14. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಕಾರಣ ಸರಕಾರದ ಆದೇಶದಂತೆ ಅ.18ರ ವರೆಗೆ ಸಮೀಕ್ಷೆ ಕಾರ್ಯವನ್ನು ಮುಂದೂಡಲಾಗಿದೆ.





ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟು ಹೋದಲ್ಲಿ ರಾಜ್ಯಮಟ್ಟದ ಸಹಾಯವಾಣಿ 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ:9972294198, ಕಾರ್ಕಳ-ಹೆಬ್ರಿ 08258- 298610 ಸಹಾಯವಾಣಿಗೆ ಕಚೇರಿ ಅವಧಿಯಲ್ಲಿ ಕರೆ ಮಾಡಿದಲ್ಲಿ ಸಮೀಕ್ಷೆದಾರರನ್ನು ಮನೆಗೆ ಕಳುಹಿಸಿ ಸಮೀಕ್ಷೆ ಕಾರ್ಯ ನಡೆಸಲಾಗುವುದು.






ಅಲ್ಲದೇ ಕುಟುಂಬದ ಸದಸ್ಯರು ತಮ್ಮ ಮೊಬೈಲ್/ಲ್ಯಾಪ್‌ಟಾಪ್‌ನಲ್ಲಿ https://kscbcseldeclaration.karnataka.gov.in- ಲಿಂಕ್ ಮೂಲಕ ಸ್ವಯಂ ನೋಂದಣಿಯನ್ನು ಮಾಡಿಕೊಳ್ಳಬಹುದು ಎಂದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top