ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ



(ನ್ಯೂಸ್ಕಡಬ) newskadaba.com,  .16- ಇಪ್ಪತೈದಕ್ಕೂ ಹೆಚ್ಚು ಮಂಗಳಮುಖಿಯರು ಫೆನಾಯಿಲ್‌ ಕುಡಿದು ಆತಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಇಂದೋರ್‌ನಲ್ಲಿ ಟ್ರಾನ್ಸ್ ಜೆಂಡರ್‌ ಸಮುದಾಯದ ಸುಮಾರು 25 ಜನರು ಫಿನೈಲ್‌ ಸೇವಿಸಿದ್ದಾರೆಂದು ಹೇಳಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.





ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಮಹಾರಾಜ ಯಶವಂತರಾವ್‌ ಆಸ್ಪತ್ರೆಯ ಉಸ್ತುವಾರಿ ವೈದ್ಯ ಡಾ. ಬಸಂತ್‌ ಕುಮಾರ್‌ ನಿಂಗ್ವಾಲ್‌ ಪಿಟಿಐಗೆ ತಿಳಿಸಿದ್ದಾರೆ.






ಟ್ರಾನ್‌್ಸಜೆಂಡರ್‌ ಸಮುದಾಯದ ಸುಮಾರು 25 ಜನರನ್ನು ನಮ್ಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ರಾತ್ರಿ ಒಟ್ಟಿಗೆ ಫಿನೈಲ್‌ ಸೇವಿಸಿದ್ದಾರೆಂದು ಹೇಳಿಕೊಂಡಿದ್ದಾರೆ, ಆದರೆ ಇದನ್ನು ತಕ್ಷಣವೇ ದೃಢೀಕರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿ ಹೇಳಿದರು.

ಹೆಚ್ಚುವರಿ ಪೊಲೀಸ್‌‍ ಉಪ ಆಯುಕ್ತ ರಾಜೇಶ್‌ ದಂಡೋಟಿಯಾ, ತನಿಖೆಯ ನಂತರವೇ ಮಂಗಳಮುಖಿ ಸಮುದಾಯದ ಜನರು ಯಾವ ವಸ್ತುವನ್ನು ಸೇವಿಸಿದ್ದಾರೆ ಮತ್ತು ಏಕೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಇನ್ನೊಬ್ಬ ಪೊಲೀಸ್‌‍ ಅಧಿಕಾರಿ, ಈ ಘಟನೆಯು ಟ್ರಾನ್‌್ಸಜೆಂಡರ್‌ ಸಮುದಾಯದ ಎರಡು ಸ್ಥಳೀಯ ಗುಂಪುಗಳ ನಡುವಿನ ವಿವಾದಕ್ಕೆ ಸಂಬಂಧಿಸಿರಬಹುದು ಎಂದು ಹೇಳಿದರು.

 

error: Content is protected !!
Scroll to Top