ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ಬರೆದ ವಿಶಿಷ್ಟ ದಾಖಲೆ



(ನ್ಯೂಸ್ಕಡಬ) newskadaba.com,  ..24 ಮಂಡ್ಯ: ನಾಡಿಗೆ ನೀರುಣಿಸುವ ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯ, ಈ ವರ್ಷ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದೆ. ಈ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಒಂದೇ ವರ್ಷದಲ್ಲಿ ಮೂರನೇ ಬಾರಿಗೆ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿ ದಾಖಲೆ ನಿರ್ಮಿಸಿದೆ





ಕಳೆದ ಹಲವಾರು ವರ್ಷಗಳಲ್ಲಿ ಸರಿಯಾದ ಅವಧಿಗೆ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗದೇ ಸಾಕಷ್ಟು ಸಮಸ್ಯೆ ನಿರ್ಮಾಣವಾಗ್ತಿತ್ತು. ಅಣೆಕಟ್ಟು ಭರ್ತಿಯಾಗದ ಸಂದರ್ಭಗಳಲ್ಲಿ ತಮಿಳುನಾಡು ನೀರಿಗಾಗಿ ಕ್ಯಾತೆ ತೆಗೆದು ವಿವಾದ ಉಲ್ಬಣಿಸುತ್ತಿತ್ತು.






ಕಳೆದ ಜೂನ್ ತಿಂಗಳಲ್ಲಿ ಅಂದರೆ ಜುಲೈ ಅಥವಾ ಆಗಸ್ಟ್‌ನಲ್ಲಿ ಭರ್ತಿಯಾಗುತ್ತಿದ್ದ ಕೆಆರ್‌ಎಸ್‌ ಜಲಾಶಯ ಜೂನ್‌ನಲ್ಲೇ ಅವಧಿಗೂ ಮೊದಲೇ ಸಂಪೂರ್ಣ ಭರ್ತಿಯಾಗುವ ಮೂಲಕ ದಾಖಲೆ ನಿರ್ಮಿಸಿತ್ತು.. 124.80 ಅಡಿಗಳ ಸಾಮರ್ಥ್ಯ ಇರುವ ಡ್ಯಾಂ ಭರ್ತಿಯಾದ ಹಿನ್ನೆಲೆಯಲ್ಲಿ ಕಾವೇರಿ ನದಿಗೆ 20 ಸಾವಿರ ಕ್ಯೂಸೆಕ್ಸ್‌ಗೂ ಅಧಿಕ ನೀರನ್ನು ಹರಿಸಲಾಗುತ್ತಿದೆ. ಹಿಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಹಾಗೂ ಜನ ಜಾನುವಾರುಗಳು ನದಿಗೆ ಇಳಿಯದಂತೆ ಕಾವೇರಿ ನೀರಾವರಿ ನಿಗಮ ಎಚ್ಚರಿಕೆ ಸಂದೇಶ ನೀಡಿದೆ.

error: Content is protected !!
Scroll to Top