(ನ್ಯೂಸ್ ಕಡಬ) newskadaba.com, ಅ..24 ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಡೆಯುತ್ತಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆ ಮತ್ತು ಮಳೆ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಸರ್ಕಾರದ ಗಡುವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯಸ್ಥ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಸಮೀಕ್ಷೆ ಹಾಗೂ ಮಳೆ ಹಿನ್ನೆಲೆ ನಗರದಾದ್ಯಂತ ಸಾವಿರಾರು ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಗದಿಪಡಿಸಿದ ಗಡುವನ್ನು ಪೂರೈಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಠಿಣ ಸಮಯವನ್ನು ಎದುರಿಸುತ್ತಿದೆ ಎಂದು ಹೇಳಿದರು..
ಇತ್ತೀಚೆಗೆ, ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಜಿಬಿಎ ಮಿತಿಯ ಐದು ಪಾಲಿಕೆಗಳಲ್ಲಿ 10,000 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿಕೊಂಡಿದ್ದು, 500 ಕಿ.ಮೀ. ರಸ್ತೆಯ ವೈಟ್ ಟಾಪಿಂಗ್ ಅನ್ನು 4,000 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದ್ದರು.












