ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ದುರ್ಮರಣ



(ನ್ಯೂಸ್ಕಡಬ) newskadaba.com,  ..30: ಭೀಕರ ಅಪಘಾತ ಸಂಭವಿಸಿದ್ದು, ರೈಲ್ವೆ ಸೇತುವೆ ನಿರ್ಮಾಣ ಕಾರ್ಯದಲ್ಲಿ ಬಳಸುತ್ತಿದ್ದ ಕ್ರೇನ್ ಇದ್ದಕ್ಕಿದ್ದಂತೆ ಉರುಳಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಬೈಕ್ ಸವಾರರು ಹಾಗೂ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಅಸ್ತವ್ಯಸ್ತ ದೃಶ್ಯ ಕಂಡುಬಂದಿದೆ.





ಘಟನೆ ಬುಧವಾರ ಬೆಳಿಗ್ಗೆ ಸಂಭವಿಸಿದ್ದು, ಕ್ರೇನ್ ರೈಲ್ವೆ ಸೇತುವೆ ಕಾಮಗಾರಿ ವೇಳೆ ಸಮತೋಲನ ಕಳೆದುಕೊಂಡು ಹಾದುಹೋಗುತ್ತಿದ್ದ ಪಿಕಪ್ ಟ್ರಕ್ ಮೇಲೆ ಬಿದ್ದಿತು ಎಂದು ಧಾರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಯಾಂಕ್ ಅವಸ್ಥಿ ತಿಳಿಸಿದ್ದಾರೆ. ಟ್ರಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಕೆಲವರು ಕ್ರೇನ್ ಅಡಿಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದ್ದು, ರಕ್ಷಣಾ ಸಿಬ್ಬಂದಿ ಸ್ಥಳದಲ್ಲೇ ಸಮಗ್ರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.






ಮೃತರನ್ನು ಜಬಲ್ಪುರ ಮೂಲದ ಕಪಿಲ್ ಸಹಾನಿ (50) ಮತ್ತು ಅಮಿತ್ ಅಗರ್ವಾಲ್ (51) ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡಗಳು ಸಹಾಯಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ಕ್ರೇನ್ ಅಡಿಯಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸುತ್ತಿದ್ದಾರೆ.

ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲದಿದ್ದರೂ, ಕ್ರೇನ್ ಯಾಂತ್ರಿಕ ದೋಷ ಘಟನೆಗೆ ಕಾರಣ ಎಂದು ಅಂದಾಜಿಸಲಾಗಿದೆ. ಘಟನೆಯಿಂದ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಸ್ಥಳೀಯರಿಗೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದ್ದಾರೆ.

error: Content is protected !!
Scroll to Top