(ನ್ಯೂಸ್ ಕಡಬ) newskadaba.com, ಅ..31: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ಸೆಷನ್ಸ್ ಕೋರ್ಟ್ನಲ್ಲಿ ವಿಚಾರಣೆ ನಡೆದಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ನವೆಂಬರ್ 3ರಂದು ಎಲ್ಲಾ ಆರೋಪಿಗಳು ಖುದ್ದು ಕೋರ್ಟ್ಗೆ ಹಾಜರಾಗುವಂತೆ ಸೂಚಿಸಿದೆ. ಜೈಲಿನಲ್ಲಿರುವ ಆರೋಪಿಗಳು ಹಾಗೂ ಜಾಮೀನು ಮೇಲಿರುವ ಆರೋಪಿಗಳು ಖುದ್ದು ಹಾಜರಾಗಬೇಕು. ಗೈರಾದರೆ ಇದ್ದಲ್ಲೇ ಬಂದು ಪೊಲೀಸರು ಅರೆಸ್ಟ್ ಮಾಡುತ್ತಾರೆ ಎಂದು ಕೋರ್ಟ್ ಎಚ್ಚರಿಸಿದೆ. ಇದರೊಂದಿಗೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಸಂಕಷ್ಟ ಹೆಚ್ಚಾಗಿದೆ. ನ.3ಕ್ಕೆ ಆರೋಪಿಗಳ ವಿರುದ್ಧ ಕೋರ್ಟ್ ಆರೋಪ ನಿಗದಿ ಪಡಿಸಲಿದೆ.
ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ!















