ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ಅಂಕಿತಾ ರಾಜ್ಯಕ್ಕೆ ದ್ವಿತೀಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ದ್ವಿತೀಯ ಪಿಯುಸಿ ಪರೀಕ್ಷೆಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿನಿಯೋರ್ವಳು ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ.

ಇಲ್ಲಿನ ಸುರತ್ಕಲ್ ಗೋವಿಂದ ದಾಸ್ ಪಿ.ಯು ಕಾಲೇಜಿನ ಸುರತ್ಕಲ್ ಹಳೆಯ ಅಂಚೆ ಕಛೇರಿ ರಸ್ತೆಯ ಶ್ರೀಧಾಮ ನಿವಾಸಿ ಪ್ರಸಾದ್ ಹಾಗೂ ಭಾರತಿ ದಂಪತಿಯ ಪುತ್ರಿ ಅಂಕಿತಾ 600 ಅಂಕಗಳಲ್ಲಿ 595 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾಳೆ. ಈಕೆ ಮಂಗಳೂರಿನ ಎಕ್ಸ್ ಪರ್ಟ್ ಕೋಚಿಂಗ್ ಸೆಂಟರ್ ನಲ್ಲಿ ತರಬೇತಿ ಪಡೆದುಕೊಂಡಿದ್ದಾಳೆ.

Also Read  ಅನಿಲ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆಗೆ ಕಡಿವಾಣ ಹಾಕಬೇಕು ➤ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ

error: Content is protected !!
Scroll to Top