(ನ್ಯೂಸ್ ಕಡಬ) newskadaba.com, ಅ.05: “ಹಸಿರು ನಡಿಗೆ – ಪ್ರತಿ ಹೆಜ್ಜೆ ಸ್ವಚ್ಛತೆಯೆಡೆಗೆ” ಎಂಬ ಧ್ಯೇಯವಾಕ್ಯದೊಂದಿಗೆ ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕಾರವಾರದಿಂದ ಮಂಗಳೂರಿನವರೆಗೆ ಏಕಾಂಗಿಯಾಗಿ ಪಾದಯಾತ್ರೆ ನಡೆಸಿದ ಹಸಿರು ದಳದ ಪರಿಸರ ಪ್ರೇಮಿ ನಾಗರಾಜ್ ಬಜಾಲ್ ಇದೀಗ ಮಂಗಳೂರಿಗೆ ತಲುಪಿದ್ದಾರೆ.
ಉಳ್ಳಾಲ ನೇತ್ರಾವತಿ ಸೇತುವೆ ಮತ್ತು ಅಡ್ಯಾರ್ ಪ್ರದೇಶದಲ್ಲಿ “ಎಲ್ಲೆಂದರಲ್ಲಿ ಕಸ ಎಸೆಯಬೇಡಿ” ಎಂಬ ಫ್ಲೆಕ್ಸ್ ಕಾರ್ಡ್ ಹಿಡಿದು ಏಕಾಂಗಿಯಾಗಿ ನಿಂತು ಹಿಂದೆ ಗಮನ ಸೆಳೆದಿದ್ದ ನಾಗರಾಜ್ ಬಜಾಲ್, ಇದೀಗ ನಿಜವಾದ ಹಸಿರು ಸಂದೇಶದ ನಡಿಗೆಯ ಮೂಲಕ ಮತ್ತೊಮ್ಮೆ ಸಾರ್ವಜನಿಕರ ಮನ ಗೆದ್ದಿದ್ದಾರೆ.
“ಹಸಿರು ನಡಿಗೆ ಸ್ವಚ್ಛತೆಯೆಡೆಗೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರವಾರದಿಂದ ಮಂಗಳೂರಿನವರೆಗೆ 300 ಕಿ.ಮೀ ಪಾದಯಾತ್ರೆ ಪೂರ್ಣಗೊಳಿಸಿದ ನಾಗರಾಜ್ ಬಜಾಲ್








