(ನ್ಯೂಸ್ ಕಡಬ) newskadaba.com, ನ.06 ಸುಳ್ಯ: ಬೆಳ್ಳಾರೆ ಸಮೀಪದ ಪೆರುವಾಜೆ ಎಂಬಲ್ಲಿ 17 ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನ. 5ರಂದು ರಾತ್ರಿ ವರದಿಯಾಗಿದೆ.
ಈತನು ಬೆಳ್ಳಾರೆಯ ದೀಪಕ್ ಕೋಲ್ಡ್ ಹೌಸ್ ನಲ್ಲಿ ಕೆಲಸಕ್ಕಿದ್ದನು..ಈ ಹುಡುಗನನ್ನು ಗಗನ್ ಎಂದು ಗುರುತಿಸಲಾಗಿದೆ, ಪೆರುವಾಜೆಯಲ್ಲಿರುವ ಬಾಡಿಗೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. .
ಮೂಲತಃ ಕಳೆಂಜದವರಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.








