ಮತ್ತೊಬ್ಬ ವ್ಯಕ್ತಿಗೆ ಜಾಮೀನು ನೀಡಲು ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿ ವಂಚನೆ-ಆರೋಪಿಯ ಆರೆಸ್ಟ್



(ನ್ಯೂಸ್ಕಡಬ) newskadaba.com,  ನ.08 ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿದ ಆರೋಪದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ ಅಬ್ದುಲ್ ಹಾಶೀಮ್ (34) ಬಂಧಿತ ಆರೋಪಿ.





ವರದಿಗಳ ಪ್ರಕಾರ, ಆರೋಪಿಯು ಪುತ್ತೂರು ನಿವಾಸಿಯೊಬ್ಬರಿಗೆ ಸೇರಿದ ಆರ್‌ಟಿಸಿ ದಾಖಲೆಯನ್ನು ತನ್ನದೇ ಎಂದು ನಂಬಿಸಿ, ಮತ್ತೊಬ್ಬ ಆರೋಪಿಗೆ ಜಾಮೀನು  ನೀಡಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣ ದಾಖಲಾಗಿದೆ.






ತನಿಖೆಯ ನಂತರ, ಪೊಲೀಸರು ನವೆಂಬರ್ 6 ರಂದು ಪುತ್ತೂರಿನ ಪಡುವನ್ನೂರು ಗ್ರಾಮದ ನಿವಾಸಿ ಅಬ್ದುಲ್ ಹಾಶಿಮ್ (34) ಅವರನ್ನು ಬಂಧಿಸಿದರು. ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಕಲಿ ಸಹಿಗಳನ್ನು ಸೃಷ್ಟಿಸಿ, ವಂಚಿಸುವ ಉದ್ದೇಶದಿಂದ ನ್ಯಾಯಾಲಯಕ್ಕೆ ಅಮೂಲ್ಯವಾದ ಭದ್ರತಾ ಬಾಂಡ್ ಜೊತೆಗೆ ಸಲ್ಲಿಸಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

 

error: Content is protected !!
Scroll to Top