ದೆಹಲಿ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಸಾವು, ಮೃತರ ಸಂಖ್ಯೆ 13ಕ್ಕೆ ಏರಿಕೆ



(ನ್ಯೂಸ್ ಕಡಬ) newskadaba.com,  .13: ದೆಹಲಿ ಕಾರ್‌ ಬಾಂಬ್‌ ಸ್ಫೋಟಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಇಲ್ಲಿನ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.







ಮೃತರನ್ನು ಬಿಲಾಲ್‌ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.ದೆಹಲಿ ಪೊಲೀಸರ ಪ್ರಕಾರ, ಬಿಲಾಲ್‌ ಸಾವಿನ ಬಗ್ಗೆ ಇಂದು ಮುಂಜಾನೆ ಆಸ್ಪತ್ರೆಯಿಂದ ಮಾಹಿತಿ ಬಂದಿದೆ. ಮರಣೋತ್ತರ ಪರೀಕ್ಷೆಯನ್ನು ಮಧ್ಯಾಹ್ನದ ನಂತರ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.






ಬಿಲಾಲ್‌ ಸಾವಿನೊಂದಿಗೆ, ಸೋಮವಾರ ಸಂಜೆ ನಡೆದ ತೀವ್ರತರವಾದ ಸ್ಫೋಟದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿದೆ, ಆದರೆ ಇನ್ನೂ ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ.

error: Content is protected !!
Scroll to Top