(ನ್ಯೂಸ್ ಕಡಬ) newskadaba.com, ನ.17: ರಾಜ್ಯದ ಐದು ಕಡೆಗಳಲ್ಲಿ ವಿಶ್ವ ದರ್ಜೆ ಗುಣಮಟ್ಟದ ಏರೋಸ್ಪೆಸ್ ಹಾಗೂ ರಕ್ಷಣಾ ಪಾರ್ಕ್ ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಈ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಸಾಮರ್ಥ್ಯವನ್ನು ಬಲಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುಮಾರ್, ಕೌಶಲಯುಕ್ತ ಪ್ರತಿಭಾವಂತರಿಗೆ ಹೊಸ ಅವಕಾಶ ಸೃಷಿಸುವ ಮೂಲಕ ಏರೋಸ್ಪೆಸ್ ಹಾಗೂ ರಕ್ಷಣಾ ಸರಕುಗಳ ಉತ್ಪಾದನೆಯಲ್ಲಿ ರಾಜ್ಯದ ಮುಂಚೂಣಿಯನ್ನು ಬಲಪಡಿಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ.












