ಜಯನಗರ ಶಾಸಕ ಹೃದಯಾಘಾತದಿಂದ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.04. ಕಳೆದ ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಜಯನಗರ ಶಾಸಕ, ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯ ಕುಮಾರ್(60) ಶುಕ್ರವಾರ ಮುಂಜಾವ ನಿಧನರಾದರು.

ಗುರುವಾರದಂದು ಚುನಾವಣಾ ಪ್ರಚಾರದ ವೇಳೆ ಕುಸಿದು ಆಸ್ಪತ್ರೆಗೆ ದಾಖಲಾಗಿದ್ದ ಅವರ ಹೃದಯ ಬಡಿತ ಹಾಗೂ ರಕ್ತದೊತ್ತಡದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದರು. ಜಯನಗರದ ಹಾಲಿ ಬಿಜೆಪಿ ಶಾಸಕರಾಗಿದ್ದ ವಿಜಯ ಕುಮಾರ್ ಅವರು ಜಯನಗರ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

Also Read  ಮೊಸಳೆಯನ್ನು ಹಿಡಿದಿಟ್ಟುಕೊಂಡು ಹಣ ಮಾಡಲು ಪ್ಲಾನ್ ಮಾಡಿದ್ದ ಹಳ್ಳಿ ಜನರು ➤ ಗ್ರಾಮಸ್ಥರಿಗೆ ಬಿಸಿ ಮುಟ್ಟಿಸಿದ ಅರಣ್ಯ ಅಧಿಕಾರಿಗಳು.!

error: Content is protected !!
Scroll to Top