ಮುಂಬೈಯಲ್ಲಿ ರಸ್ತೆ ಅಪಘಾತ-ಕಲ್ಮಾಡಿಯ ಯುವಕ ಮೃತ್ಯು



(ನ್ಯೂಸ್ಕಡಬ) newskadaba.com,  .22:   ಮುಂಬೈಯಲ್ಲಿ ಕಲ್ಮಾಡಿಯ  ಯುವಕನೊಬ್ಬ ಶುಕ್ರವಾರ ತಡರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.







ಮೃತರನ್ನು ಉಡುಪಿಯ ಕಲ್ಮಾಡಿಯ ಮೂಲದ ಇನಿಶ್ ಲಸ್ರಾದೊ ಎಂದು ಗುರುತಿಸಲಾಗಿದೆ. ಅವರು ಮೋಟಾರ್ ಸೈಕಲ್ ಅಪಘಾತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.






ಇನಿಶ್ ಕಳೆದ 3 ವರ್ಷಗಳಿಂದ ಥಾಣೆಯಲ್ಲಿರುವ ಬಹುರಾಷ್ಟೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕಲ್ಮಾಡಿ ಚರ್ಚ್ ನ ಐಸಿವೈಎಂ ಘಟಕದಲ್ಲಿ ಮತ್ತು ವಿವಿಧ ಚರ್ಚ್ ಚಟುವಟಿಕೆಗಳಲ್ಲಿ ಬಹಳ  ಸಕ್ರಿಯರಾಗಿದ್ದರು.

error: Content is protected !!
Scroll to Top