ಉಳ್ಳಾಕ್ಳು-ಕಾಚುಕುಜುಂಬ ದೈವಗಳ ಪುನಃ ಪ್ರತಿಷ್ಠಾ ಕಲಶಾಭಿಷೇಕ: ಪ್ರಾರ್ಥನೆ ಸಲ್ಲಿಕೆ



(ನ್ಯೂಸ್ ಕಡಬ) newskadaba.com, ಡಿ.03: ಶ್ರೀ ಉಳ್ಳಾಕ್ಳು ಮತ್ತು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ನಡೆಯಲಿರುವ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.





ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ, ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು ಕುಜುಂಬ ಸನ್ನಿಧಿಯಲ್ಲಿ ಈ ಪ್ರಾರ್ಥನಾ ವಿಧಿಯನ್ನು ನೆರವೇರಿಸಲಾಯಿತು.






ಈ ಸಂದರ್ಭದಲ್ಲಿ ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪರಮೇಶ್ವರ ಬಿಳಿಮಲೆ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕಳ, ವಿವಿಧ ಸಮಿತಿಗಳ ಸದಸ್ಯರು, ಕಾರ್ಯದರ್ಶಿ ಆನಂದ ಗೌಡ ಜಲಕದ ಹೊಳೆ ಸೇರಿದಂತೆ ಅನೇಕ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

error: Content is protected !!
Scroll to Top